www.dgnsgreenworld.blogspot.com

Friday, September 27, 2019

ಬದುಕು ಎಂದರೇನು?

SAVE NATURE, HEALTHY, WEALTHY & WISE. dgnsgreenworld Family

*ಬದುಕು*                   
ಬದುಕು ಎಂದರೇನು? 
ಈ ಜಗತ್ತಿನ ಗಣ್ಯರ ಅಭಿಪ್ರಾಯದಂತೆ ಒಬ್ಬೊಬ್ಬರದು ಒಂದೊಂದು ರೀತಿ: 

ಬುದ್ಧ ಹೇಳುತ್ತಾನೆ, *"ಪ್ರೀತಿ ಮತ್ತು ಶಾಂತಿ".*   
ದುರ್ಯೋಧನ ಹೇಳುತ್ತಾನೆ, *"ಹಠ ಮತ್ತು ಛಲ".*   
ಏಕಲವ್ಯ ಹೇಳುತ್ತಾನೆ, *"ಗುರಿ".* 
ಯುಧಿಷ್ಠಿರ ಹೇಳುತ್ತಾನೆ, *"ಧರ್ಮ"*. 
ಶ್ರೀ ಕೃಷ್ಣ ಹೇಳುತ್ತಾನೆ, *"ಸಮದರ್ಶಿತ್ವ".*
ಭೀಷ್ಮ ಹೇಳುತ್ತಾನೆ, *"ಪ್ರತಿಜ್ಞೆ".*
ಒಬ್ಬ ಸಂತ ಹೇಳುತ್ತಾನೆ, *"ಭಕ್ತಿ".* 
ಒಬ್ಬ ಸನ್ಯಾಸಿ ಹೇಳುತ್ತಾನೆ, *"ವೈರಾಗ್ಯ".*                   
ಅಲೆಕ್ಸಾಂಡರ್ ಹೇಳುತ್ತಾನೆ, *"ಯುದ್ಧ".* 
ಶ್ರೀಮಂತ ಹೇಳುತ್ತಾನೆ, *"ಮೋಜು ಮತ್ತು ಮಸ್ತಿ".* 
ಮಧ್ಯಮ ವರ್ಗದವನು ಹೇಳುತ್ತಾನೆ, *"ಉದ್ಯೋಗ".*
 ಹಸಿದವನು ಹೇಳುತ್ತಾನೆ, *"ತನ್ನ ಪಾಲಿನ ಅರ್ಧ ರೊಟ್ಟಿ".* 

ಹೀಗೆ ಒಬ್ಬೊಬರಿಗೆ ಒಂದೊಂದು ರೀತಿ ಬದುಕು ಕಾಣುತ್ತದೆ. ಅವರವರ ಆಲೋಚನೆಯಂತೆ ಅವರವರು  ಬದುಕನ್ನು ಸಮರ್ಥಿಸುತ್ತಾರೆ.

ಬದುಕೆನ್ನುವುದು  ಸುಂದರವಾದ ಅನುಭವ.  ಪ್ರತಿದಿನ, ಪ್ರತಿ ಗಂಟೆ, ಪ್ರತಿ ನಿಮಿಷ  ಎಲ್ಲವೂ ಅಮೂಲ್ಯ.  ಈ ಯಾವುದೂ ಹಿಂತಿರುಗಿ ಬರುವುದಿಲ್ಲ.  ಒಮ್ಮೆ ಕಳೆದರೆ ಮುಗಿಯಿತು .  ಆದ್ದರಿಂದಲೇ ಪ್ರತಿ ಕ್ಷಣದ ಬದುಕು ನವ ನವೀನ.  ಹೀಗೆಯೇ  ನಮ್ಮ ಬದುಕು  ಅನಿಶ್ಚಿತ ಕೂಡಾ.  ಮುಂದಿನ ಕ್ಷಣ ಏನೆಂದು ಯಾರಿಗೂ  ತಿಳಿಯದು.  ಈ ಕ್ಷಣವೇ ಪರಮ ಪವಿತ್ರ.  ಈ ಕ್ಷಣವನ್ನು ಸಂಪೂರ್ಣ  ಅನುಭವಿಸುವುದೇ  ಬದುಕು.     ಸಂಘರ್ಷ, ಮನಸ್ತಾಪ, ಕೋಪ, ದ್ವೇಷ  ಇವುಗಳನ್ನು ಕಡಿಮೆ ಮಾಡುತ್ತಾ  ಪ್ರೀತಿ, ಸೌಹಾರ್ದ, ಸಹಾಯ, ಕಾರುಣ್ಯ, ಮತ್ತು ಹಸನ್ಮುಖದ ನಡುವೆ ಬದುಕುವುದೇ ಸಾರ್ಥಕ ಜೀವನ.    ನಮ್ಮ ಚಿಂತನೆ ಸಕಾರಾತ್ಮಕವಾಗಿದ್ದರೆ ಆ ಕ್ಷಣದಲ್ಲಿ ಒಂದಷ್ಟು ಚೈತನ್ಯ ಮೂಡುತ್ತದೆ. ಇಲ್ಲವಾದರೆ ನಿರಾಸೆ ನಮ್ಮದಾಗುತ್ತದೆ.                                 

ಕಷ್ಟ, ನೋವು, ನಿರಾಸೆ, ದುಃಖ ಎಲ್ಲವು ಎಲ್ಲರಿಗೂ ಇದೆ. ಆದರೆ, ಅವುಗಳ  ಮಧ್ಯೆ ಸಂತೋಷದಿಂದ , ತೃಪ್ತಿಯಿಂದ  ಬದುಕುವುದೇ  ಜೀವನ...
dgnsgreenworld@gmail.com
ಧನ್ಯವಾದಗಳು .☘☘☘
🍁🍁🍁🍁🍁🍁🍁

Sunday, September 22, 2019

ಹಿರಿಯರು ಹೇಳಿಕೊಟ್ಟ ಊಟದ ಕಲೆ

SAVE NATURE, HEALTHY, WEALTHY & WISE. dgnsgreenworld Family

*ಹಿರಿಯರು ಹೇಳಿಕೊಟ್ಟ ಊಟದ ಕಲೆ* ಯ ನಿಯಮಗಳು :*

1)  ಕಾರೆ ಸೊಪ್ಪನ್ನು ತಿಂದರೂ ಕಾಯಕದಿಂದಲೇ ಗಳಿಸಿರಬೇಕು. ....
2)  ಊಟಕ್ಕೆ ಕುಳಿತುಕೊಳ್ಳುವ ಮೊದಲು ಕುಳಿತುಕೊಳ್ಳುವ ಜಾಗ ಶುಚಿಯಾಗಿರಬೇಕು…..
 3)  ಬಾಯಿ ಮುಕ್ಕಳಿಸಿ ಶುಚಿಯಾಗಿ ಕೈತೊಳೆದುಕೊಳ್ಳಬೇಕು....
4)  ಗುರುನಾಮ ಸ್ಮರಣೆ ಮಾಡಿ ನೆಲದ ಮೇಲೆಯೇ ಚಕ್ಕಂಬಕ್ಕಾಲು ಹಾಕಿ ಕುಳಿತುಕೊಳ್ಳಬೇಕು.....
5)  ಊಟಕ್ಕೆ ಕುಳಿತಾಗ ನೆತ್ತಿಯ ಮೇಲೆ ಪೇಟ - ಪಟಗಾ ಸುತ್ತಿರುವುದಾಗಲೀ…. ಟೋಪಿಯಾಗಲೀ  ಇರಬಾರದು….
6) ಕರವಸ್ತ್ರವಾಗಲೀ ಒಲ್ಲಿ ಟವಲ್ ಆಗಲೀ ನಿಮ್ಮ ಜೊತೆಗಿರಬೇಕು……
6)  ಊಟದೆಲೆ ಅಥವಾ ತಟ್ಟೆ ಈಗಾಗಲೇ ಶುಚಿಯಾಗಿಟ್ಟಿದ್ದರೂ ಮತ್ತೊಮ್ಮೆ ಕೊಂಚ ನೀರಿನಲ್ಲಿ ತೊಳೆಯಬೇಕು. …
7) ಊಟಕ್ಕೆ ಕುಳಿತಾಗ ಪಾದರಕ್ಷೆಗಳನ್ನು ಧರಿಸಿರಬಾರದು…..
8) ಊಟ ಮಾಡುವ ವೇಳೆಯಲ್ಲಿ ಕಸ ಗುಡಿಸಬಾರದು…… ಒಂದೇ ಸಮನೆ ದಿಟ್ಟಿಸಬಾರದು….
9) ಯಾರೊಬ್ಬರೂ ಅತ್ತಿಂದಿತ್ತ ಅಡ್ಡಕಸುಬಿ ಓಡಾಡಬಾರದು…..
10) ಕುಡಿಯುವ ನೀರು ತುಂಬಿದ ಚೆಂಬು -ಲೋಟ ಪಕ್ಕದಲ್ಲಿರಬೇಕು,….
11) ಗಂಟಲು ಮೇಲೆತ್ತಿ ಲೋಟದಲ್ಲಿಯೇ ನೀರು ಕುಡಿಯಬೇಕು,…. ಕಚ್ಚಿ ಕುಡಿಯಬಾರದು……
12) ನಾಯಿಮರಿ ಅಥವಾ ನಮ್ಮ ಜೀವಿಗಳಿಗಾಗಿ ಮೊದಲು ಒಂದು ತುತ್ತು ತೆಗೆದಿರಿಸಬೇಕು.....
13)  ಊಟದ ವೇಳೆಗೆ ಯಾರಾದರೂ ಬಳಿಗೆ ಬಂದರೆ ಮೊದಲು ಅವರಿಗೆ ಊಟ ನೀಡಲು ಆದ್ಯತೆ ಕೊಡಬೇಕು...
14)  ನೀರು ಅಥವಾ ಸಾರಿನಲ್ಲಿ ಒಮ್ಮೆ ಅಂಗೈ ತೇವ ಮಾಡಿಕೊಳ್ಳಬೇಕು…..
15)  ಅಂಗೈ ಮುಂಗೈ ಮೂತಿಗಳಿಗೆ ಅನ್ನ - ಮುದ್ದೆ ಅಥವಾ ತಿನ್ನುವ ಯಾವುದೂ ಮೆತ್ತಿಕೊಳ್ಳದಂತೆ ನಾಜೂಕಾಗಿರಬೇಕು…...
16)  ತೊಡೆಯ ಮೇಲಾಗಲೀ ನೆಲದ ಮೇಲಾಗಲೀ ದರ್ಬಾರಿನಂತೆ ಎಡಗೈ ಹೂರಿಕೊಂಡಿರಬಾರದು....
17)  ತಲೆ ಮೈಕೈ ಕೆರೆದುಕೊಳ್ಳಬಾರದು…. ಕಣ್ಣು ಉಜ್ಜಬಾರದು…. ಅತ್ತಲಿತ್ತ ಪದೇ ಪದೇ ತಲೆ ಎತ್ತಿ ನೋಡಬಾರದು
18)  ನಾವು ತಿನ್ನುವ ಶಬ್ಧ ಪಕ್ಕದಲ್ಲಿ ಕುಳಿತವರಿಗೆ ಕೇಳಿಸಬಾರದು.... ಲೊಸ ಲೊಸ ಲೊಸಗುಟ್ಟುತ್ತಾ ಅಥವಾ ಗಬಗಬ ಬುಕ್ಕಬಾರದು...
19)  ಉಣ್ಣುವ ತುತ್ತು ಎಣಿಸಬಾರದು.....ಮುದ್ದೆ - ರೊಟ್ಟಿ ಎಣಿಸಬಾರದು.... ಊಟಕ್ಕೆ ನೀಡುವಾಗಲೇ ಆಳು ನೋಡಿ ಅನ್ನ ಬಡಿಸಬೇಕು
20) ಇಷ್ಟು ತಿಂದ - ಅಷ್ಟು ತಿಂದ ಎಂದು ಮಾತನಾಡಬಾರದು....
21) ಗಂಭೀರವಾದ ಯಾವ ಸಂಗತಿಗಳನ್ನೂ ಪ್ರಸ್ತಾಪಿಸಬಾರದು.... (ಈಗಿನ ಸೇರ್ಪಡೆ: ಟೀವಿ ಮೊಬೈಲ್ ಇತ್ಯಾದಿ ನೋಡಬಾರದು)
22)  ನೆತ್ತಿಗೇರಿಸಿಕೊಳ್ಳುವಂತೆ ನಗುವುದಾಗಲೀ ಮಾತಾಡುವುದಾಗಲೀ ಮಾಡಬಾರದು…..
23) ಊಟಕ್ಕೆ ನೀಡುವ ವ್ಯಕ್ತಿಯನ್ನು ಹೊರತುಪಡಿಸಿ ಕುಟುಂಬದ ಸದಸ್ಯರೆಲ್ಲರೂ ಒಟ್ಟಿಗೆ ಊಟಕ್ಕೆ ಕುಳಿತುಕೊಳ್ಳಬೇಕು….
24) ಕುಳಿತು ಸಾವಧಾನವಾಗಿ ತಿನ್ನಬೇಕೇ ಹೊರತು ನಿಂತುಕೊಂಡು, ಓಡಾಡುತ್ತಾ ಅಥವಾ ಪ್ರಯಾಣಿಸುತ್ತಾ ತಿನ್ನಬಾರದು….
25)  ಮಧ್ಯದಲ್ಲಿ ಅವಶ್ಯಕವಿದ್ದರೆ ಅರ್ಥಮಾಡಿಕೊಂಡು ಊಟಕ್ಕೆ ಬಡಿಸುವವರು ನೀಡಬೇಕೇ ಹೊರತು ಇಷ್ಟು ಸಾಕ - ಅಷ್ಟು ಸಾಕ ಎಂದು ಅಳತೆ ಪ್ರಮಾಣಗಳಲ್ಲಿ ತೋರಿಸಿ ಕೇಳಬಾರದು.
26)  ತಂಗಳಾದರೂ ಸರಿಯೇ ಬಿಸಿಯೆಂದು ಭಾವಿಸಿ ಕಣ್ಣಿಗೊತ್ತಿಕೊಂಡು ಆರೋಗಿಸಬೇಕು...... ಒಂದು ಅಗುಳನ್ನೂ ವ್ಯರ್ಥ ಮಾಡಬಾರದು
27)  ತಿನ್ನುವ ಪದಾರ್ಥವನ್ನು ಇಲಿ ಗೆಬರಾಡಿದಂತೆ ತರಿದು ತಿನ್ನಬಾರದು….. ಅಥವಾ ಕೈನಲ್ಲಿ ತೂಗಿಸಿಕೊಂಡು ತಿನ್ನಬಾರದು…..
28) ಊಟದೆಲೆ ತಟ್ಟೆಯ ಪಕ್ಕದಲ್ಲಿ ಪದಾರ್ಥ ಚೆಲ್ಲಾಡಬಾರದು…..
29) ಬಿಸಿ ಆರಿಸಿಕೊಂಡು ತಿನ್ನಬೇಕು….. ತುಟಿಗಳನ್ನು ಮುಚ್ಚಿಡಿದು ಬಾಯೊಳಗೇ ನಮುಲಿ ನುಂಗಬೇಕು….
30) ಒಮ್ಮೆ ಬಾಯಿಗಿರಿಸಿಕೊಳ್ಳಲು ಎಷ್ಟು ಬೇಕೋ ಅಷ್ಟನ್ನು ಮಾತ್ರ ಬೆರಳುಗಳಿಂದ ತೆಗೆದುಕೊಳ್ಳಬೇಕೇ ಹೊರತು ಅಂಗೈ ಬಳಸಬಾರದು….
31) ಊಟ ಮುಗಿದ ಬಳಿಕ ಅಗತ್ಯವಿರುವಷ್ಟು ನೀರು ಕುಡಿಯಬೇಕು…..
32) ಊಟದ ಬಳಿಕ ಅಭ್ಯಾಸವಿದ್ದಲ್ಲಿ ತಾಂಬೂಲ ಸವಿಯಬೇಕು….  ಕಳ್ಳೇಬೀಜ, ಚಿನಕ್ಹುರುಳಿ, ಹಣ್ಣು ಮುಂತಾದವು ಸೇವಿಸಬಹುದು…..
33)  ಊಟ ಕೊಟ್ಟವರ ಬಳಿ ಕೃತಜ್ಞತೆಯ ನಾಲ್ಕು ಮಾತಾಡಬೇಕು...
34) ಊಟ ಮುಗಿದ ಕೂಡಲೇ.. ಊಟಕ್ಕೆ ಕುಳಿತ ಜಾಗದಲ್ಲಿ ಅರೆಗಳಿಗೆಯೂ ಕೂರಬಾರದು...
 35) ಕೈತೊಳೆದುಕೊಂಡು ಊಟ ಮಾಡಿದವರೇ ಊಟದ ತಟ್ಟೆಯನ್ನು ತೊಳೆದಿಡಬೇಕು....
36) ಹೊತ್ತು ಮೀರಿಯಾಗಲೀ ಹೊತ್ತಿಗೆ ಮುಂಚಿತವಾಗಲೀ ಊಟ ಮಾಡಬಾರದು...
37) ಉಪ್ಪು ಹುಳಿ ಖಾರ ಯಾವುದೇ ವ್ಯತ್ಯಾಸಗಳಿದ್ದರೂ ಅಸಮಾಧಾನ ವ್ಯಕ್ತಪಡಿಸುವುದಾಗಲೀ ಸಿಟ್ಟಿಗೇಳುವುದಾಗಲೀ ಮಾಡಬಾರದು....
38) ಊಟ ಮಾಡುವಾಗ ಊಟವನ್ನಷ್ಟೇ ಮಾಡಬೇಕು ಹೊರತು ಇನ್ನೊಂದು ಮತ್ತೊಂದು ಕೆಲಸ ಮಾಡಬಾರದು....
39) ಇನ್ನೊಂದು ಮಾಡಿಕೊಂಡೇ ಊಟ ಮಾಡಬಾರದು.... ಅಥವಾ ಊಟ ಮಾಡಿಕೊಂಡೇ ಇನ್ನೊಂದು ಮಾಡಬಾರದು.
40) ಊಟ ಮಾಡಿ ಮೈ ಮುರಿಯಬಾರದು
41) ಊಟದ ಬಳಿಕ ಗಾಳಿಗೆ ಮೈಯೊಡ್ಡಿ ನಾಲ್ಕೆಜ್ಜೆ ನಡೆದರೆ ಚೆಂದ
42) ಎದೆ ಬಗ್ಗಿಸಿ ಊಟ ಮಾಡಬೇಕೇ ಹೊರತು ಎದೆ ಸೆಟೆದು (ಸೇದಿಕೊಂಡು) ಊಟ ಮಾಡಬಾರದು
43) ಎಂಜಲ ಕೈನಲ್ಲಿ ತಟ್ಟೆ ಲೋಟ ಇತರೆ ಯಾವುದೇ ಪಾತ್ರೆ ಪಗಡಿ ಮುಟ್ಟಬಾರದು
44) ಸಾರಿನ ಚೌಟು ಅನ್ನಕ್ಕೂ ಅನ್ನದ ಚಮಚವನ್ನು ಪಾಯಸಕ್ಕೂ ಮುಟ್ಟಿಸದೆ ಹೀಗೆ ಎಲ್ಲವೂ ಪ್ರತ್ಯೇಕವಾಗಿ ಇರಿಸಬೇಕು
45) ಎಂಜಲು ಮಾಡಿದ ಪದಾರ್ಥಗಳನ್ನು ಇತರರಿಗೆ ನೀಡಬಾರದು
46) ಊಟದ ಬಳಿಕವೂ ಬಾಯಿ ಮುಕ್ಕಳಿಸುವುದನ್ನು ಮರೆಯಬಾರದು
47) ಊಟ ಮಾಡಿದ ತಕ್ಷಣವೇ ಮಲಗಬಾರದು ಅಥವಾ ಮಲಗಿಕೊಂಡು ಏನನ್ನೂ ತಿನ್ನಬಾರದು
48) ಊಟದ ನಡುವೆ ಇನ್ನೂ ಹೆಚ್ಚಿನ ಅಗತ್ಯ ಅಹಾರ ಬೇಗ ಬರಲಿಲ್ಲವೆಂದು ಕೂಗುವುದಾಗಲೀ ಪಾತ್ರೆ ಶಬ್ದ ಮಾಡುವುದಾಗಲೀ ಮುಂತಾದ ಅಸಮಾಧಾನ ತೋರಬಾರದು.
49) ನಿದ್ರೆಗಣ್ಣಿನಲ್ಲಿ ತೂಕಡಿಸುತ್ತಾ ಊಟ ಮಾಡಬಾರದು.
50) ಮೊದಲು ತಟ್ಟೆಯಲ್ಲಿ ಬಡಿಸಿದ ಆಹಾರವನ್ನು ನೋಡಿಕೊಂಡು, ಇನ್ನೂ ಬೇಕೆನಿಸಿದರೆ ಮಾತ್ರ ಹಾಕಿಸಿಕೊಳ್ಳಬೇಕು. ತಟ್ಟೆಯಲ್ಲಿ ಸ್ವಲ್ಪವೂ ಉಳಿಯದಂತೆ ಊಟ ಮಾಡಬೇಕು.
ಊಟದ ಕಲೆ ಅಂದರೆ 'ಊಟ ಮಾಡುವುದೂ ಒಂದು ಕಲೆ' .
ಯಾರಾದರೂ ಈ ಕಲೆಗಳನ್ನು ರೂಢಿಸಿಕೊಂಡರೆ ಉಂಡ ಅನ್ನಹಾರ ಚೆನ್ನಾಗಿ ಪಚನವಾಗಿ ದೇಹಕ್ಕೆ ಶಕ್ತಿಯನ್ನು ಕೊಡುತ್ತದೆ.
ಈ ರೀತಿ ಊಟ ಮಾಡುವವರನ್ನು ನೋಡಿ, ನಾವೂ ಹೀಗೆಯೇ ಊಟ ಮಾಡಬೇಕು ಅಂತ  ಬೇರೆಯವರು ಭಾವಿಸುವಂತೆ ಊಟ ಮಾಡಬೇಕು.
ವಂದನೆಗಳೊಂದಿಗೆ

Monday, September 9, 2019

ಸಂತೋಷ ಎಲ್ಲಿದೆ, ಅಮೃತ ಕ್ಷಣ ಯಾವುದು?

SAVE NATURE, HEALTHY, WEALTHY & WISE. dgnsgreenworld Family

ನಾವೆಲ್ಲರೂ  ನಮ್ಮ ಜೀವನದಲ್ಲಿ , ಅಮೂಲ್ಯವಾದ ಪ್ರತಿಕ್ಷಣವನ್ನು , ಸಂಭ್ರಮಿಸುವುದನ್ನೇ  ಮರೆತಿರುತ್ತೇವೆ. ಯೌವನ, ವಯಸ್ಕ , ಈ ಹಂತಗಳನ್ನು ಆನಂದಿಸದೆ, ದಾಟುತ್ತೇವೆ. ಆಮೇಲೆ ಹಳಹಳಿಸುತ್ತೇವೆ.
ಬಾಲ್ಯದಲ್ಲಿ ಸಣ್ಣಪುಟ್ಟ ವಿಷಯಕ್ಕೂ, ಸಂಭ್ರಮಿಸುತ್ತಿದ್ದವರು, ಬೆಳೆಯುತ್ತಾ ಹೋದಂತೆ, ಆ ಖುಷಿಯನ್ನು ಮೂಲೆಗೆ ತಳ್ಳಿ, ಕೈಕಾಲು ಕಟ್ಟಿ ಕೂರಿಸಿ ಬಿಡುತ್ತೇವೆ.

ಆಗ , ಒಂದು ರೂಪಾಯಿಯ ಮಿಠಾಯಿ / ಪೆಪ್ಪರಮಿಂಟಿಗೂ ಸಂಭ್ರಮಿಸುತ್ತಿದ್ದವರು, ಸಾವಿರಾರು ರೂಪಾಯಿ ಖರ್ಚು ಮಾಡಿ, ಸ್ಟಾರ್ ಹೋಟೆಲಿನಲ್ಲಿ  ಉಂಡರೂ , ಈಗ ಖುಷಿ ಪಡುವುದಿಲ್ಲ.
ಮೊದಲ ಬಾರಿ  ಸೈಕಲನ್ನು ಬಿದ್ದು  ಎದ್ದು ಓಡಿಸಿದ ಖುಷಿ , ಇಂದು ಲಕ್ಷಗಟ್ಟಲೇ ಸುರಿದು ಕೊಂಡ ಕಾರಿನಲ್ಲಿ ಕಾಣುವುದಿಲ್ಲ. ಆಕಾಶದಲ್ಲಿ ಹಾರಾಡುವ ವಿಮಾನ ನೋಡಿ, ಕೈಬೀಸಿ ಟಾಟಾ ಮಾಡುತ್ತಿದ್ದ ಖುಷಿ, ಇಂದು ವಿಮಾನ ದಲ್ಲಿಯೇ ಪ್ರಯಾಣಿಸಿದರೂ ತೃಪ್ತಿ ಇಲ್ಲ.

ಬಾಲ್ಯದ ಮರಕೋತಿ ,ಕುಂಟೆಬಿಲ್ಲೆ , ಕಣ್ಣಾಮುಚ್ಚಾಲೆ, ಲಗೋರಿ ಆಟಗಳು, ಸೈಕಲ್ ತುಳಿಯುವುದನ್ನು  ಎದ್ದು , ಬಿದ್ದು , ಕಲಿತದ್ದು , ಪರೀಕ್ಷೆಯಲ್ಲಿ ಒಂದು ಮಾರ್ಕ್ಸ್ ಜಾಸ್ತಿ ತೆಗೆದುಕೊಂಡದ್ದು , ಅದಕ್ಕಾಗಿ ಸಂಭ್ರಮಿಸಿದ್ದು , ಗದ್ದೆ ತೋಟಗಳಲ್ಲಿ ಸುತ್ತಾಡಿದ್ದು , ಹಣ್ಣು ಕದ್ದು ತಿಂದಿದ್ದು , ಶಾಲಾ  ಕಾಲೇಜು ಸ್ಪರ್ಧೆಗಳಲ್ಲಿ, ಬಹುಮಾನ, ಪ್ರಶಸ್ತಿ ಗಳಿಸಿದ್ದು , ಜೀವನದ ಸಂಗಾತಿಯೇ ಗೆಳೆಯನಾಗಿದ್ದು ,  ತೊಟ್ಟಿಲು ಕಟ್ಟಿದ್ದು , ಮಗುವಿನ ನಗುವಿನಲ್ಲಿ  ಲೋಕವನ್ನೇ ಮರೆತಿದ್ದು , ಗುರು ಹಿರಿಯರ ಆಶೀರ್ವಾದ ಪಡೆದಿದ್ದು , ಪ್ರೀತಿ ಪಾತ್ರರ ಮೆಚ್ಚುಗೆಯ ಮಾತುಗಳಿಂದ , ಅವರ ಅಪ್ಪುಗೆಯಿಂದ ಅರಳಿದ್ದು , ಎಲ್ಲವೂ ಸಂಭ್ರಮಗಳೇ..ಕೆಲವು ಸಣ್ಣ ಸಂಭ್ರಮಗಳಾದರೆ , ಮತ್ತೊಂದಿಷ್ಟು ದೊಡ್ಡ ಪ್ರಮಾಣದ ಸಂಭ್ರಮಗಳು.

ಸೈಟು ಖರೀದಿಸಿದ್ದು , ಮನೆ ಕಟ್ಟಿಸಿದ್ದು , ಹೊಸ ಗಾಡಿ ಕೊಂಡದ್ದು , ಬರಹಗಳನ್ನು ಬರೆದದ್ದು , ಕಥಾಗುಚ್ಛದಲ್ಲಿ ಹಾಕಿದ್ದು , ಪತ್ರಿಕೆಗಳಿಗೆ ಕಳಿಸಿದ್ದು , ಅವು ಮೆಚ್ಚುಗೆ ಗಳಿಸಿದ್ದು , ಎಲ್ಲವೂ ದೊಡ್ಡ ಸಂಭ್ರಮಗಳೇ. ಆ ಕ್ಷಣವನ್ನು ಆನಂದಿಸಲೇ ಬೇಕಾದ್ದು. ಆದರೆ, ನಾವು ಆಗಲೂ, ಅಯ್ಯೋ ಬಿಡಿ, ಇದೇನು ದೊಡ್ಡ ವಿಷಯ ? ನನ್ನ ಆಸೆ ಬೇರೇನೇ ಇತ್ತು , ಎಂದು ನಮ್ಮ ಮೂಗನ್ನು ನಾವೇ ಮುರಿಯುತ್ತೇವೆ.

ಇದಕ್ಕೆಲ್ಲ ಕಾರಣ ಏನು ? ಅತಿಯಾದ ಆಸೆಯೇ, ಅಸೂಯೆಯೇ, ಅತೃಪ್ತಿಯೇ, ಆಮಿಷವೇ , ಬೇಕು ಬೇಕೆಂಬ ಹಾಹಾಕಾರವೇ ? ಅಥವಾ ಇವೆಲ್ಲದರ ಚರ್ವಿತಚರ್ವಣ ಭಾವವೇ ???

ಒಟ್ಟಿನಲ್ಲಿ ,  ನಮ್ಮೊಳಗಿರುವ ತೃಪ್ತಿಯ ಸೆಲೆಯನ್ನು , ನಾವೇ ಬತ್ತಿಸಿಕೊಂಡು , ಮತ್ತೆಲ್ಲೋ ಅದರ ಹುಡುಕಾಟದಲ್ಲಿ ನಿರತರಾಗಿರುತ್ತೇವೆ. ಅತೃಪ್ತ ಮನಸ್ಸಿಗರಾಗಿ ತೊಳಲಾಡುತ್ತಿರುತ್ತೇವೆ. ತೃಪ್ತಿ , ಎಲ್ಲಿಯಾದರೂ ಮಾರಾಟಕ್ಕಿದೆಯೇ ? ಎಂದು ಅರಸುತ್ತಿರುತ್ತೇವೆ.

ಅದನ್ನೇ ಡಿ ವಿ ಜಿಯವರು ಹೇಳಿದ್ದು ,

ಅವರೆಷ್ಟು ಧನವಂತರ್ , ಇವರೆಷ್ಟು ಬಲವಂತರ್ |
ಅವರೆಷ್ಟು ಯಶವಂತರ್ ಎನುವ ಕರುಬಿನಲಿ ||
ಭವಿಕ ನಿನಗೆಷ್ಟಿಹುದೊ ಮರೆತು ನೀಂ ಕೊರಗುವುದು |ಶ
ವಂದನೆಗಳೊಂದಿಗೆ, 

ಕಡಲೆ ಕಾಯಿ ಬೀಜ ಬಾದಾಮಿಗಿಂತ ಹೆಚ್ಚು ಆರೋಗ್ಯಕ್ಕೆ ಒಳ್ಳೆಯದೆಂದು ಅಧ್ಯಯನಗಳು ತಿಳಿಸಿವೆ ..

ಸಿಕ್ಕಾಪಟ್ಟೆ ಹಸಿ ಕಡ್ಲೆಕಾಯಿ ಬೀಜ ಬಂದಿದೆ... ಹೈಬ್ರಿಡ್ ಕೂಡ ಸಿಕ್ತಾ ಇದೆ... ಚಳಿಗಾಲಕ್ಕೆ ಕಡ್ಲೆಕಾಯಿ ಬೀಜ ಅತ್ಯಂತ ಉತ್ತಮ ಆಹಾರ ಯಾಕೆ.. ಒಂದು ಸಲ ನೋಡಿ ಇದು ನನ್ನ ಹ...

Green World