💐🌺💐 #ಪುರಾಣಗಳಿಂದ #ಆಯ್ದ #ಕೆಲವು #ಸುಂದರವಾದ #ಸುಭಾಷಿತಗಳು 💐🌺💐
🔹ಮಕ್ಕಳು, ಹೆಂಡತಿ, ಮಿತ್ರರು ಮತ್ತು ಧನಗಳಲ್ಲಿ ಅತ್ಯಂತ ವ್ಯಾಮೋಹವನ್ನಿಡಬಾರದು. ಅವರ ಅಗಲಿಕೆ ನಿಶ್ಚಿತ.
👉ರಾಮಾಯಣ
🔹ಕಾಮವು ವಿಷಯಭೋಗದಿಂದ ಎಂದಿಗೂ ಶಾಂತವಾಗುವುದಿಲ್ಲ. ತುಪ್ಪದ ಹವಿಸ್ಸಿನಿಂದ ಬೆಂಕಿಯು ಹೆಚ್ಚುವಂತೆ ಅದು ಇನ್ನು ಪ್ರಭಲವಾಗುತ್ತದೆ.
👉ಮಹಾಭಾರತ ಆದಿಪರ್ವ
🔹ಸಾವಿರಾರು ತಂದೆ ತಾಯಿಗಳು , ನೂರಾರು ಹೆಂಡರು ಮಕ್ಕಳು ಈ ಸಂಸಾರದಲ್ಲಿ ಆಗಿಹೋದರು. ಹೀಗಿರುವಾಗ ಅವರು ಯಾರ ಸಂಬಂಧಿಗಳು. ? ನಾವು ಯಾರ ಸಂಬಂಧಿಗಳು ?
👉ಮಹಾಭಾರತ ಶಾಂತಿ ಪರ್ವ
🔹ಬೆಳಿಗ್ಗೆ ಮಾಡಿದ ಅಡಿಗೆ ಮತ್ತು ಆಹಾರವು ಹಳಸಿಹೋಗುತ್ತದೆ. ಹೀಗಿರುವಾಗ, ಅದೇ ಅನ್ನರಸದಿಂದ ಬೆಳೆದು ಬಂದ ಈ ಶರೀರ ಹೇಗೆ ನಿತ್ಯವಾದೀತು.
👉ಗರುಡ ಪುರಾಣ
🔹ತಾಳವಿಲ್ಲದ ರಾಗ ಹೇಗೋ, ಮಾನವಿಲ್ಲದ ರಾಜ ಹೇಗೋ, ಮದೋದಕವಿಲ್ಲದ ಆನೆ ಹೇಗೋ, ಹಾಗೆ ಜ್ಞಾನವಿಲ್ಲದ ಯತಿ.
👉ರಾಮಾಯಣ
🔹ಸರ್ಪವು ಜೀರ್ಣವಾದ ಪೊರೆಯನ್ನು ಬಿಡುವಂತೆ , ಯಾವನು ತಾಳ್ಮೆಯಿಂದ ಕೋಪವನ್ನು ದೂರಮಾಡುವನೋ ಅವನೇ ಮನುಷ್ಯ.
👉ರಾಮಾಯಣ ಸುಂದರ ಕಾಂಡ
🔹ಸುಖ ಸಾಧನಗಳಾದ ಪ್ರಿಯ ವಿಷಯಗಳು ಈ ಮೂರುಲೋಕದಲ್ಲಿ ಎಷ್ಟಿವಿಯೋ ಅವೆಲ್ಲವೂ ಸೇರಿದರು, ಇಂದ್ರಿಯಯಗಳ ಸೆಳೆತಕ್ಕೆ ಒಳಗಾದವನನ್ನು ತೃಪ್ತಿಪಡಿಸಲಾರವು.
👉ಶ್ರೀಮದ್ ಭಾಗವತ
🔹ಗಾಳಿಯನ್ನು ಸುತ್ತಿ ಬಂಧಿಸಬಹುದು. ಆಕಾಶವನ್ನಾದರೂ ಕತ್ತರಿಸಬಹುದು. ಅಲೆಗಳನ್ನು ಪೋಣಿಸಬಹುದು. ಆದರೆ ಆಯುಸ್ಸಿನಲ್ಲಿ ನಂಬಿಕೆ ಇಡುವುದಕ್ಕಾಗುವುದಿಲ್ಲ.
👉ಗರುಡ ಪುರಾಣ
🔹ಕಲಿಯುಗದಲ್ಲಿ ಯಾರು ಹರಿಸ್ಮರಣೆ ಮಾಡುತ್ತಾರೋ, ಅಥವಾ ಮಾಡಿಸುತ್ತಾರೆಯೋ, ಅವರೇ ಭಾಗ್ಯಶಾಲಿಗಳು ಹಾಗು ಕೃತಾರ್ಥರು.
👉ಶ್ರೀಮದ್ ಭಾಗವತ
🙏 ಓಂ ನಮೋ ಭಗವತೆ ವಾಸುದೇವಾಯ ನಮಃ🙏
🌷🌷ಶುಭವಂದನೆಗಳು, ಶುಭದಿನ, ಶುಭಮಸ್ತು, ಸರ್ವೇ ಜನಾ ಸುಖೀನೋ ಭವಂತು🌷🌷
No comments:
Post a Comment
welcome to dgnsgreenworld Family