www.dgnsgreenworld.blogspot.com

Monday, September 28, 2020

ಅಮೃತವಾಣಿಗಳ ಗುಚ್ಛ ಇಲ್ಲಿದೆ. ಓದಿರಿ - ಆನಂದಿಸಿರಿ. ಅರ್ಥ ತಿಳಿಯಿರಿ, ಬದುಕಿನುದ್ದಕ್ಕೂ ಅನ್ವಯಿಸುವುದನ್ನು ಅಳವಡಿಸಿಕೊಳ್ಳಿರಿ.

🕉️🙏🙏🙏🙏🙏🙏🙏🕉️

 *ಅಮೃತವಾಣಿ* 
==================== ಅಮೃತವಾಣಿಗಳ ಗುಚ್ಛ ಇಲ್ಲಿದೆ. ಓದಿರಿ - ಆನಂದಿಸಿರಿ. ಅರ್ಥ ತಿಳಿಯಿರಿ, ಬದುಕಿನುದ್ದಕ್ಕೂ ಅನ್ವಯಿಸುವುದನ್ನು ಅಳವಡಿಸಿಕೊಳ್ಳಿರಿ.
👇👇👇👇👇👇👇👇👇👇👇
೦೧) *"ರಸ್ತೆ ಮೇಲೆ ಕಲ್ಲಿನ ಹರಳುಗಳಿದ್ದರೆ ಒಳ್ಳೆಯ ಬೂಟು ಹಾಕಿಕೊಂಡು ನಡೆಯಬಹುದು..!!"*
*ಆದರೆ*....
*"ಒಳ್ಳೆಯ ಬೂಟಿನೊಳಗೆ ಒಂದೇ ಒಂದು ಕಲ್ಲಿನ ಹರಳು ಇದ್ದಲ್ಲಿ ಅತ್ಯುತ್ತಮ ರಸ್ತೆಯ ಮೇಲೂ‌ ನಾಲ್ಕು ಹೆಜ್ಜೆ ನಡೆಯಲು ಸಾಧ್ಯವಿಲ್ಲ...!!"*
*"ಹೊರಗಿನ ಸವಾಲುಗಳಿಗಿಂತಲೂ ನಾವು ಒಳಗಿನ ದುರ್ಬಲತೆಯಿಂದಲೇ ಸೋಲುವುದು ಹೆಚ್ಚು.!"*
""""""""""""""""""""""""""""""

೦೨) *ತುಳಿಯುವವರ ಮಧ್ಯೆ ಬೆಳೆದು ನಿಲ್ಲಬೇಕು ಅವಾಗಲೇ ವ್ಯಕ್ತಿತ್ವಕ್ಕೆ ಬೆಲೆ ಸಿಗುವುದು.*
""""""""""""""""""""""""""""""

೦೩) *ಪ್ರಯತ್ನ ಎಂಬುದು ಬೀಜದ ಹಾಗೆ. ಬಿತ್ತುತ್ತಲೇ ಇರಿ. ಒಂದಲ್ಲ ಒಂದು ದಿನ ಮರವಾಗಿ ಫಲ ಕೊಟ್ಟೇ ಕೊಡುತ್ತದೆ....*
""""""""""""""""""""""""""""""

 ೦೪) *ಜೀವನದಲ್ಲಿ ಕಲಿಕೆಗೆ ಕೊನೆಯಿಲ್ಲ. ಏಕೆಂದರೆ ಜೀವನ ಕಲಿಸುವುದನ್ನು ನಿಲ್ಲಿಸುವುದಿಲ್ಲ.*
""""""""""""""""""""""""""""""

೦೫) *ಒಂದು ಕಾಲು ಮುಂದೆ ಒಂದು ಕಾಲು ಹಿಂದೆ. ಆದರೆ ಮುಂದಿನದಕ್ಕೆ ಗರ್ವವಿಲ್ಲ, ಹಿಂದಿನ ಅದಕ್ಕೆ ಬೇಸರವಿಲ್ಲ, ಏಕೆಂದರೆ ಇದು ಕ್ಷಣಿಕ.*
""""""""""""""""""""""""""""""

೦೬) *ಸಮುದ್ರ ಎಂದೂ ನೀರಿಗಾಗಿ ಯೋಚಿಸುವುದಿಲ್ಲ. ತಾನಾಗೇ ನೀರು ಅಲ್ಲಿಗೆ ಹರಿದುಬರುತ್ತದೆ*
*ಯಶಸ್ಸು ಮತ್ತು ಕೀರ್ತಿಗಳೂ ಹಾಗೆಯೇ. ಒಮ್ಮೆ ಅದಕ್ಕೆ ಬೇಕಾದ ಯೋಗ್ಯತೆ ಗಳಿಸಿದ್ದಲ್ಲಿ ನಮ್ಮನ್ನು ಹಿಂಬಾಲಿಸಿ ಬರುತ್ತವೆ.*
""""""""""""""""""""""""""""""

೦೭) *ಪ್ರಭಾವ ನೋಡಿ ಹತ್ತಿರ ಬರುವುದಕ್ಕಿಂತ, ಸ್ವಭಾವ ನೋಡಿ ಬರುವವರು ನಿಜವಾದ ಹಿತೈಷಿಗಳು.*
""""""""""""""""""""""""""""""

೦೮) *ಕತ್ತಲೆಯಿಲ್ಲದೆ ದೀಪದ ಮಹತ್ವ ತಿಳಿಯಲಾರದು.. ದುಃಖದ ಅನುಭವವಿಲ್ಲದೆ ಸುಖದ ಮಹತ್ವ ತಿಳಿಯಲಾರದು.*
""""""""""""""""""""""""""""""

೦೯) *ಸೈಕಲ್ ತುಳಿದು ಕಾಲು ನೋವಾಗಿ ಬೈಕ್ ಬಂತು ಬೈಕ್ ಓಡಿಸಿ ಬೆನ್ನು ನೋವಾಗಿ ಕಾರು ಬಂತು ಕಾರು ಚಾಲನೆ ರೂಢಿಯಾಗಿ ಹೊಟ್ಟೆ ಬಂತು ಹೊಟ್ಟೆ ಇಳಿಸಲು ಜಿಮ್ ಸೇರಿ ಸೈಕಲ್ ತುಳಿವ ಕಾಲ " ಮತ್ತೆ " ಬಂತು ಇದೇ  - Recycling ??*
""""""""""""""""""""""""""""""

೧೦) *ಮೀನು ಇಡೀ ಸಮುದ್ರವನ್ನು ತನ್ನದು ಎಂದು ಭಾವಿಸಿ ಜೀವಿಸುವಂತೆ, ನೀನು ಕೂಡಾ ಇಡೀ ಜಗತ್ತನ್ನು ನಿನ್ನ ದೇಶ ಎಂದು ಭಾವಿಸಿ ಜೀವಿಸು.*
""""""""""""""""""""""""""""""

೧೧) *ವಿಕಾಸವೇ ಜೀವನ; ಸಂಕೋಚವೇ ಮರಣ. ಪ್ರೇಮವೆಲ್ಲಾ ವಿಕಾಸ; ಸ್ವಾರ್ಥವೆಲ್ಲಾ ಸಂಕೋಚ; ಆದುದರಿಂದ ಪ್ರೇಮವೇ ಬದುಕಿನ ಧರ್ಮ.*
""""""""""""""""""""""""""""""

೧೨) *ಜೀವನದಲ್ಲಿ ಹಣದ ಕೊರತೆ ಇದ್ದರೂ ಗುಣದ ಕೊರತೆ ಇರಬಾರದು ಏಕೆಂದರೆ ಹಣವನ್ನು ಬೇರೆಯವರಿಂದ ಕೇಳಿ ಪಡೆಯಬಹುದು ಆದರೆ ಗುಣವನ್ನು ಕೇಳಿ ಪಡೆಯಲು ಸಾಧ್ಯವಿಲ್ಲ.*
""""""""""""""""""""""""""""""

೧೩) *ಎಲ್ಲಿಯವರೆಗೆ ನಮಗೆ ನಾವು ಪ್ರಾಮಾಣಿಕರಾಗಿರುತ್ತೇವೆಯೋ ಅಲ್ಲಿಯವರೆಗೂ ಖಂಡಿತವಾಗಿ, ನಾವು ಸಂತೋಷದಿಂದಿರುತ್ತೇವೆ....*
""""""""""""""""""""""""""""""

೧೪) *ನಿಮ್ಮ ಮನಸ್ಸು ಮತ್ತು ಹೃದಯ ಸರಿಯಾದ ದಿಕ್ಕಿನಲ್ಲಿದ್ದರೆ ಬದುಕು ಎತ್ತ ಹೋಗುತ್ತದೆ ಎಂದು  ಚಿಂತಿಸಬೇಕಿಲ್ಲ.*
""""""""""""""""""""""""""""""

೧೫) *ವಂಚಕರಿಗೆ ಕಿರೀಟವಾಗುವುಕ್ಕಿಂತ ಉತ್ತಮರಿಗೆ ಪಾದುಕೆಯಾಗುವುದು ಶ್ರೇಷ್ಠ...!*
*ಕಾಲೆಳೆವವರ ನಾಯಕನಾಗುವುದಕ್ಕಿಂತ ಕೈಹಿಡಿವವರ ಸೇವಕನಾಗುವುದು ಉತ್ಕೃಷ್ಟ..!*
""""""""""""""""""""""""""""""

೧೬) *ಉತ್ತಮ ಸಮಯಕ್ಕಾಗಿ ಕಾಯುವುದಕ್ಕಿಂತ, ಸಮಯವನ್ನು ಉತ್ತಮವಾಗಿ ಉಪಯೋಗಿಸಿಕೊಳ್ಳೋಣ. ಏಕೆಂದರೆ ಸಮಯ ಎಂದೂ ಭೇದ ತೋರುವುದಿಲ್ಲ.*
""""""""""""""""""""""""""""""

೧೭) *ಚಿಂತೆಗೂ, ಚಿತೆಗೊ ಇರುವ ವ್ಯತ್ಯಾಸ ಒಂದು "೦" ಮಾತ್ರ...*

*ಚಿತೆ ಸತ್ತ ದೇಹವನ್ನು ಸುಡುತ್ತದೆ, ಚಿಂತೆ ಬದುಕಿರುವ ದೇಹವನ್ನೇ ಸುಡುತ್ತದೆ.!!*
""""""""""""""""""""""""""""""""

೧೮) *ಸಹನೆ ನಿನ್ನದಾದರೆ ಸಕಲವು ನಿನ್ನದೆ, ವಿನಯ ನಿನ್ನದಾದರೆ ವಿಜಯವು ನಿನ್ನದೇ.*

೧೯) *ಕತ್ತಲೆ ಆವರಿಸಿಕೊಳ್ಳದೆ ನಕ್ಷತ್ರಗಳು ಮಿನುಗುವುದಿಲ್ಲ ಹಾಗೆಯೇ ಕಷ್ಟಗಳು ಬಾರದೆ ವ್ಯಕ್ತಿಯ ಸಾಮರ್ಥ್ಯ ಅನಾವರಣಗೊಳ್ಳಲು ಸಾಧ್ಯವಿಲ್ಲ.*
""""""""""""""""""""""""""""""""

೨೦) *ನಡೆದಷ್ಟು ದಾರಿ ಇದೆ ಪಡೆದಷ್ಟು ಭಾಗ್ಯವಿದೆ ಎಂಬುದೇ ಜಗತ್ತು ನಮಗೆ ನೀಡುವ ಸಂದೇಶವಾಗಿದೆ.*
""""""""""""""""""""'"""""""""'""

೨೧) *ಬದುಕುವ ಆಸೆ ಇದ್ದರೆ ನಿನ್ನ ಶತ್ರುಗಳ ಕಣ್ಣೆದುರಲ್ಲೇ ಬದುಕು ಅವರು ನಿನ್ನ ಮುಂದೆ ಸುಳಿದಾಗಲೆಲ್ಲ ನಿನ್ನಲ್ಲಿ ಬದುಕುವ ಛಲ ಎಚ್ಚೆತ್ತುಕೊಳ್ಳುತ್ತದೆ.*
""""""""""""""""""""""""""""""""

೨೨) *ನಿಮ್ಮ ನಗು ಜಗತ್ತನ್ನು ಬದಲಿಸಲಿ. ಆದರೆ ನಿಮ್ಮ ನಗುವನ್ನು ಬದಲಿಸಲು ಜಗತ್ತಿಗೆ ಅವಕಾಶ ಕೊಡಬೇಡಿ.*
"""""''''''''"""""""""""""""""""""'''''

೨೩) *"ಸಮಯಕ್ಕೆ ರಜೆ ಇಲ್ಲ  ಸ್ವಪ್ನಕ್ಕೆ  ಅಂತಿಮ ತಾರೀಖು ಇಲ್ಲ ಜೀವನದಲ್ಲಿ ತಾತ್ಕಾಲಿಕ ವಿರಾಮ ಕೀಲಿ ಇಲ್ಲ ...ಜೀವಿಸಿ....ಪ್ರೀತಿಸಿ... ಜೀವನದಲ್ಲಿನ ಪ್ರತೀ ಕ್ಷಣ ಅನುಭವಿಸಿ ಆನಂದಿಸಿ "*
"""""""""""""""""""""""""""""

೨೪) *ತಾಯಿ ಇರುವವರೆಗೂ ಹಸಿವು ಗೊತ್ತಾಗಲ್ಲ. ತಂದೆ ಇರುವವರೆಗೂ ಜವಾಬ್ದಾರಿ ಗೊತ್ತಾಗಲ್ಲ.*
""""""""""""""""""""""""""""""""

೨೫) *ಇಲ್ಲಿ ಎಲ್ಲರೂ ಹುಟ್ಟಿದ್ದು ಅಳುವಿನಿಂದ ನಗುವಿಗಾಗಿ ಜೀವನಪರ್ಯಂತ ಶ್ರಮಪಡಲೇ ಬೇಕು.*
""""""""""""""""""""""""""""""""

೨೬) *ನಿಮಗೆ ಶತ್ರುಗಳು ಹುಟ್ಟಬೇಕೆಂದರೆ  ನೀವು ಅನ್ಯಾಯ ಮಾಡಬೇಕೆಂದಿಲ್ಲ, ಕೆಲವೊಮ್ಮೆ ಜೀವನದಲ್ಲಿ ನೀವು ಸಾಧಿಸುವ ಯಶಸ್ಸುಗಳೇ ನಿಮಗೆ ಶತ್ರುಗಳನ್ನು ಸೃಷ್ಟಿ ಮಾಡುತ್ತವೆ.*
""""""""""""""""""""""""""""""""

೨೭) *ಬೈಯ್ಯೋರು ಬದುಕೋಕೆ ಹೇಳಿದರು...ಹೋಗಳೋರು ಹಾಳಾಗೋಕೆ ಹೇಳಿದರು...*

 *ಬೈಯೋರು ಬಾಗಿಲೊಳಗಿರಬೇಕು, ಹೋಗಳೋರು ಬಾಗಿಲಾಚೆ ಇರಬೇಕು.*
"""''''"""""""""""""""""""""""""""

೨೮) *ಶ್ರೀಮಂತರ ಜೊತೆ ಸ್ನೇಹ ಮಾಡಿ ತಪ್ಪೇನಿಲ್ಲ, ಆದರೆ ಬಡವರ ಜೊತೆಗೆ ಪ್ರೀತಿಯಿಂದ ಮಾತನಾಡಿ ಏಕೆಂದರೆ ಸತ್ತ ಮೇಲೆ ಹೆಗಲು ಕೊಡುವವರು ಅವರೇ, ಶ್ರೀಮಂತರು ನೇರವಾಗಿ ಕಾರಿನಲ್ಲಿ ಸ್ಮಶಾನಕ್ಕೆ ಬರುತ್ತಾರೆ ಅಷ್ಟೇ"*
"""""""""""""""""""""""""""""""

೨೯) *ದಾನ ಧರ್ಮಕ್ಕೇ ಕಣ್ಣಿಲ್ಲ ನ್ಯಾಯ ನೀತಿಗೆ ಸಾವಿಲ್ಲ..., ಜೀವ ಚಿಕ್ಕದು ಜೀವನ ದೊಡ್ಡದು..., ಸತ್ತವನಿಗೆ ಒಂದು ದಾರಿ, ಸಾಧಿಸಿದವನಿಗೆ ಸಾವಿರ ದಾರಿ.*
"""""""""""""""""""""""'"""""""

೩೦) *ಹಣತೆ ಮಣ್ಣಿನದಾಗಿರಲಿ, ಬಂಗಾರದ್ದಾಗಿರಲಿ ಅದು ಮುಖ್ಯವಲ್ಲ. ಕತ್ತಲಾದಾಗ ಅದು ಎಷ್ಟು ಬೆಳಗುತ್ತದೆ ಎಂಬುದು ಮುಖ್ಯ*
      *ಹಾಗೆಯೇ ಗೆಳೆಯ ಬಡವನಾಗಿರಲಿ ಶ್ರೀಮಂತನಾಗಿರಲಿ ಅದು ಮುಖ್ಯವಲ್ಲ, ಕಷ್ಟದ ಸಮಯದಲ್ಲಿ ಅವರು ನಮಗೆಷ್ಟು ಜೊತೆಯಾಗುತ್ತಾರೆ ಎಂಬುದು ಮುಖ್ಯ*
""""""""""""""""""""""""""""""

 ೩೧) *ಗಡಿಯಾರವನ್ನು ನೋಡಿ ಕೆಲಸ ಮಾಡುವವರು ಕೊನೆಯವರೆಗೂ ಕಾರ್ಮಿಕರಾಗಿಯೇ ಉಳಿಯುತ್ತಾರೆ*

*ಗಡಿಯಾರವನ್ನು ನೋಡದೆ ದುಡಿಯುವವರು ಮಾಲಿಕರಾಗಿ ಬೆಳೆಯುತ್ತಾರೆ*
🕉️🙏🏻🙏🏻🙏🏻🙏🏻🙏🏻🕉️
🌹🌹🌹🌹🌹🌹🌹🌹

Sunday, September 27, 2020

*"ಶ್ರೀಕೃಷ್ಣ" ಎಂಬ ಆತ್ಮೀಯ ಬಂಧು*

🕉️ ಓಂ ಶ್ರೀ ಗುರುಭ್ಯೋ ನಮಃ 🕉️ ‌      ‌       ‌       ‌       ‌       ‌       ‌        ‌      ‌                                                                                                         *"ಶ್ರೀಕೃಷ್ಣ" ಎಂಬ ಆತ್ಮೀಯ ಬಂಧು*

🔮ಎಲ್ಲಿಯೂ ಈ ಬದುಕಿನ ಜಂಜಡಗಳಿಂದ ವಿಮುಖವಾಗುವ ಪಾಠ ಹೇಳುವುದಿಲ್ಲ‌. 

🔮ಸಂಸಾರದಲ್ಲಿದ್ದುಕೊಂಡೆ ಮುಕ್ತಿಯ ಪಡೆಯುವ ದಾರಿ ತೋರಿಸಿದ ವ್ಯಕ್ತಿತ್ವ ಅದು. 

🔮ಆತ ದೈವೀ ಸಂಭೂತನಾದರೂ ಮಹಾಭಾರತದುದ್ದಕ್ಕೂ ತನ್ನ ಯೋಚನೆಗಳ, ನಿರ್ಧಾರಗಳ ಚಾಣಾಕ್ಷತೆಯಿಂದಲೇ ಕಾರ್ಯ ಸಾಧಿಸುತ್ತಾನೆಯೇ ಹೊರತು ದೈವೀ ಶಕ್ತಿಯ ಪ್ರಯೋಗ ಮಾಡುವುದಿಲ್ಲ. 

🔮ಜಗತ್ತಿನ ಒಳಿತಿಗಾಗಿ ಆತ ಕೈಗೊಳ್ಳುವ ಪ್ರತಿ ನಿರ್ಧಾರವೂ ಒಂದು ಜೀವನ ಪಾಠ‌.

🔮 ಆತ ಜಗವೆಂಬ ಪ್ರಜಾಪ್ರಭುತ್ವದ ಚಾಣಾಕ್ಷ ಹಾಗೂ ಅತ್ಯುನ್ನತ ಮೌಲ್ಯಗಳ ಬೋಧಿಸಿದ ರಾಜಕಾರಣಿ. 

🔮ಕೃಷ್ಣನ ಅದೆಷ್ಟೋ ಕಥೆಗಳು ನಮ್ಮದೇ ಏನೋ ಅನಿಸುವಷ್ಟು ಹತ್ತಿರವಾಗುತ್ತವೆ. ನಮ್ಮ ಬದುಕಿನ ಹಲವು ಸಮಸ್ಯೆಗಳಿಗೆ ಆ ಕಥೆಗಳು ಅಥವಾ ಕಥೆಯಲ್ಲಿ ಬರುವ ಪಾತ್ರಗಳು ಉತ್ತರವಾಗಬಲ್ಲವು. ಸಂಬಂಧಗಳ ನಡುವಿನ ಗುದ್ದಾಟ, ವೈಷಮ್ಯ, ಹಾಗೂ ಅವನ್ನು ಕೃಷ್ಣ ನಿಭಾಯಿಸುವ ರೀತಿ ಎಲ್ಲವೂ ಅತ್ಯಪೂರ್ವ. ಅದಕ್ಕೇ ತಾನೆ ಮಹಾಭಾರತ ಮತ್ತೆ ಮತ್ತೆ ಮನಸನ್ನು ತಟ್ಟುವುದು. ಸಂಬಂಧಗಳೊಡನೆ ಹೋರಾಡಲಾರೆ ಎಂದು ಅರ್ಜುನ ಕುಳಿತಾಗ ಭಗವದ್ಗೀತೆ ಎಂಬ ಜೀವನ ಸತ್ಯವನ್ನು ಭೋದಿಸಿದ ಆ ಪಾರ್ಥಸಾರಥಿ *“ಇಲ್ಲಿ ಈಸಬೇಕು, ಇದ್ದು ಜಯಿಸಬೇಕು”* ಎಂಬ ಸಾರ್ವತ್ರಿಕ ಸತ್ಯದ ಅನಾವರಣ ಮಾಡುತ್ತಾನೆ. 

🔮ಅದಕ್ಕೇ ನಮಗೆ ಶ್ರೀ ಕೃಷ್ಣ ಕಾಣುವುದು ಜೀವನ ಪ್ರೀತಿಯಾಗಿ. ಸಂದರ್ಭಗಳಿಗೆ ಹೆದರಿ ಹೇಡಿಯಂತೆ ಕರ್ತವ್ಯ ವಿಮುಖನಾಗುವುದು ಉಚಿತವಲ್ಲ. 

🔮ನಾವು ಕೈಗೊಂಡಿರುವ ಕಾರ್ಯ ಒಳಿತಾಗಿದ್ದರೆ ಬೇರೆಲ್ಲವೂ ನಗಣ್ಯ ಎಂಬ ನಗ್ನ ಸತ್ಯದ ಅರಿವನ್ನು ಕೃಷ್ಣನ ವ್ಯಕ್ತಿತ್ವ ಪದೇ ಪದೇ ಮಾಡಿಸುತ್ತದೆ.

🔮ಈ ಬೆಣ್ಣೆ ಕೃಷ್ಣ ಎಲ್ಲರಿಗೂ ಅದೆಷ್ಟು ಆತ್ಮೀಯ ಅನ್ನುವುದಕ್ಕೆ ಅವನ ಕುರಿತಾಗಿ ರಚಿತವಾಗಿರುವ ಹಾಡುಗಳೇ ಸಾಕ್ಷಿ. 

🔮ಅದೆಷ್ಟು ಹಾಡುಗಳು; ಅಬ್ಬಾ ಬಹುಷಃ ಎಣಿಕೆಗೆ ಸಿಗದ ಸಂಖ್ಯೆ ಅದು.

*“ಬೆಣ್ಣೆ ಕದ್ದ ನಮ್ಮ ಕೃಷ್ಣ..ಬೆಣ್ಣೆ‌ ಕದ್ದನಮ್ಮ.. ಬೆಣ್ಣೆ ಕದ್ದು ಜಾರುತ ಬಿದ್ದು ಮೊಣಕಾಲೂದಿಸಿಕೊಂಡನಮ್ಮ..”*

🔮ದೇವರ ದೇವ ಆ ಕೃಷ್ಣ ಬೆಣ್ಣೆ ಕದ್ದನಂತೆ, ಜಾರಿ ಬಿದ್ದು ಮೊಣಕಾಲು ಬೇರೆ ಊದಿಸಿಕೊಂಡನಂತೆ. ಈ ಒಂದು ಸಾಲು ಸಾಕಲ್ಲವೇ ಕೃಷ್ಣ ಅದೆಷ್ಟು ಆತ್ಮೀಯ ಎಂದು ತಿಳಿಯಲು.

*“ಅಮ್ಮಾ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮಾ…”*

🔮ದೇವರೇ ಇಡುವ‌ ದೇವರಾಣೆ ಅದೆಷ್ಟು ‌ಸೊಗಸು ಅಲ್ಲವೇ?

*“ಉಡುಪಿಯ ಕಂಡೀರಾ? ಉಡುಪಿಯ ಕೃಷ್ಣನ ಕಂಡೀರಾ?*

*ಕೃಷ್ಣನ ಕಂಡೀರಾ? ಕೃಷ್ಣನ ಉಡುಪಿಯ ಕಂಡೀರಾ?”*

🔮ಉಡುಪಿಯ ಕೃಷ್ಣ, ಕೃಷ್ಣನದೇ ಉಡುಪಿ. ಅದೆಷ್ಟು ಸುಂದರ ಬಾಂಧವ್ಯ ಇದು ಅಲ್ಲವೇ?

🔮ಹೀಗೆ ಶ್ರೀಕೃಷ್ಣ ನಮಗೆ ಅವನ ರೂಪದಿಂದಲಾಗಲಿ, ಹೆಸರಿನಿಂದಾಗಲಿ, ಅಥವಾ ಈ ಹಾಡುಗಳಿಂದಾಗಲಿ, ಬೇರೆಲ್ಲೂ ಸಿಗದ, ಮನದೊಳಗೆ ಸಣ್ಣ ಕಚಗುಳಿ ಇಡುವ ನಗುವನ್ನು ತರುವ, ಅದೆಲ್ಲೋ ದೂರದಿಂದ ಅಗೋಚರವಾಗಿ ತನ್ನ ಮುರಳಿಯ ನಾದದಿಂದ ಆತ್ಮಾನಂದ ಕೊಡುವ ಮೋಜುಗಾರ. ಜಗತ್ತೇ ಅವನ ಲೀಲೆ, ಅದರೊಳಗೆ ಮಾನವ ರೂಪಿಯಾಗಿ ಬಂದು ಆತ ನಡೆಸಿದ ಲೀಲೆಗಳಿಗೆ ಮಿತಿ ಇಲ್ಲ.

🔮ಇನ್ನೊಂದು ದಾಸರ ಪದದ ಸಾಲು ನೆನಪಾಗುತ್ತಿದೆ.

*“ಮಣ್ಣುಂಡ ಬಾಯ ತೆರೆದು, ಬ್ರಹ್ಮಾಂಡವನೆ ತೋರಿದ ಕೃಷ್ಣ; ನಿನ್ನ ಲೀಲೆ ಪಾಡಲು ಮತಿಯು ಸಾಲದು…”*

🔮ನಿಜ. ಅವನ ಲೀಲೆಗಳ ಹಾಡಿ ಹೊಗಳುವಷ್ಟು ಮತಿ ನಮಗೆಲ್ಲಿಂದ ಬರಬೇಕು ಹೇಳಿ. 

🔮ಇಲ್ಲಿ ನಾವು ವ್ಯಕ್ತ ಪಡಿಸಲು ಯತ್ನಿಸಿರುವುದು ಅವನ ಮೇಲಿನ ನಮ್ಮ ಪ್ರೀತಿ ಹಾಗೂ ನಮಗೇ ಅರಿಯದ ನಿಷ್ಕಾರಣ ಆಕರ್ಷಣೆ ಅಷ್ಟೇ.

🔮ಶ್ರೀ ಕೃಷ್ಣನ ವ್ಯಕ್ತಿತ್ವದಲ್ಲಿ ನಮ್ಮನ್ನು ಅತಿಯಾಗಿ ಆಕರ್ಷಿಸುವ ಗುಣವೆಂದರೆ, ಆತ ಸಾಮಾನ್ಯರೊಂದಿಗೆ ಸಾಮಾನ್ಯನಾಗಿದ್ದು ಕೂಡ ತನ್ನ ವ್ಯಕ್ತಿತ್ವದ ಘನತೆಯನ್ನು‌ ಉಳಿಸಿಕೊಳ್ಳುವುದು. 

🔮ಸಾರಥಿಯಾಗಿ ಅರ್ಜುನನಿಗೆ ಜೊತೆ ನೀಡುವ ಕೃಷ್ಣ,ಸಂದರ್ಭದ ಅಗತ್ಯತೆಯನ್ನರಿತು, ತನ್ನ ವಿಶ್ವರೂಪ‌ದರ್ಶನ ಮಾಡಿಸುತ್ತಾನೆ. 

🔮ಹಾಗೆಯೇ ಯಾರೇ ಆಗಲಿ ತಮ್ಮಲ್ಲಿರುವ ಅದ್ಭುತ ಶಕ್ತಿಗಳನ್ನು ಪ್ರದರ್ಶನಕ್ಕಿಡದೇ ಅಗತ್ಯ ಬಿದ್ದಾಗ  ಅದನ್ನು ಬಳಸಿ ಆ ಮೂಲಕ ತಮ್ಮ‌ ವ್ಯಕ್ತಿತ್ವದ ಘನತೆಯನ್ನು ಕಾಪಾಡಿಕೊಳ್ಳಬೇಕು ಎಂಬುದು ನಮ್ಮ ಅಭಿಪ್ರಾಯ.


ಕಡಲೆ ಕಾಯಿ ಬೀಜ ಬಾದಾಮಿಗಿಂತ ಹೆಚ್ಚು ಆರೋಗ್ಯಕ್ಕೆ ಒಳ್ಳೆಯದೆಂದು ಅಧ್ಯಯನಗಳು ತಿಳಿಸಿವೆ ..

ಸಿಕ್ಕಾಪಟ್ಟೆ ಹಸಿ ಕಡ್ಲೆಕಾಯಿ ಬೀಜ ಬಂದಿದೆ... ಹೈಬ್ರಿಡ್ ಕೂಡ ಸಿಕ್ತಾ ಇದೆ... ಚಳಿಗಾಲಕ್ಕೆ ಕಡ್ಲೆಕಾಯಿ ಬೀಜ ಅತ್ಯಂತ ಉತ್ತಮ ಆಹಾರ ಯಾಕೆ.. ಒಂದು ಸಲ ನೋಡಿ ಇದು ನನ್ನ ಹ...

Green World