www.dgnsgreenworld.blogspot.com

Tuesday, March 16, 2021

ನಮಗೆ ಏನಾದರೂ ಕೆಟ್ಟದ್ದು ಆದರೆ ಅದನ್ನು ಕೂಡಲೇ ಮರೆಯಬೇಕು, ಒಳ್ಳೆಯದು ಆದರೆ ಯಾವಾಗಲೂ ನೆನಪಿನಲ್ಲಿಡಬೇಕು.

ಒಂದು ಸಲ ಅಣ್ಣ - ತಮ್ಮಂದಿರಿಬ್ಬರು ಸಮುದ್ರ ತೀರದಲ್ಲಿ ಯಾವುದೋ ವಿಷಯಕ್ಕಾಗಿ ಜಗಳ ಆಡುತ್ತಿರುತ್ತಾರೆ. ಆಗ ಅಣ್ಣನು ತಮ್ಮನ ಕೆನ್ನೆಗೆ ಹೊಡೆದಾಗ ತಮ್ಮನು ಏನು ಹೇಳುವುದಿಲ್ಲ. 

#ಬದಲಾಗಿ ಮರಳಿನ ಮೇಲೆ ಈ ರೀತಿಯಾಗಿ ಬರೆಯುತ್ತಾನೆ... " ಇವತ್ತು ನನ್ನ ಅಣ್ಣ ನನ್ನ ಕೆನ್ನೆಗೆ ಹೊಡೆದ." 

ಮತ್ತೇ ಮಾರನೆಯ ದಿನ ಸ್ನಾನ ಮಾಡಲು ಸಮುದ್ರಕ್ಕೆ ಹೋದಾಗ ತಮ್ಮ ಆಕಸ್ಮಿಕವಾಗಿ ಸಮುದ್ರದಲ್ಲಿ ಮುಳುಗಿ ಹೋಗುತ್ತಿರುತ್ತಾನೆ. 

ಆಗ ಅಣ್ಣನು ತಮ್ಮನ ಪ್ರಾಣವನ್ನು ರಕ್ಷಿಸುತ್ತಾನೆ. ಆಮೇಲೆ ತಮ್ಮನು ಕಲ್ಲಿನ ಮೇಲೆ ಈ ರೀತಿಯಾಗಿ ಬರೆಯುತ್ತಾನೆ... " #ಇವತ್ತು_ನನ್ನ ಅಣ್ಣ ನನ್ನ ಪ್ರಾಣವನ್ನು ರಕ್ಷಿಸಿದ."

ಅಣ್ಣ: ನಿನ್ನೆ ಹೊಡೆದಾಗ ಮರಳಿನ ಮೇಲೆ ಬರೆದೆ ಹಾಗೂ ಇವತ್ತು ಪ್ರಾಣ ಉಳಿಸಿದಾಗ ಕಲ್ಲಿನ ಮೇಲೆ ಬರೆದೆ ಈ ರೀತಿ ಯಾಕೆ?

ತಮ್ಮ:  ನಮಗೆ ಯಾರಾದರೂ ದುಃಖವನ್ನು ಕೊಟ್ಟರೆ ಅದನ್ನು ಮರಳಿನ ಮೇಲೆ ಬರೆದಿಡಬೇಕು. ಏಕೆಂದರೆ ಅದು ಬಹು ಬೇಗನೆ ಅಳಿಸಿ ಹೋಗುತ್ತದೆ. ಆದರೆ ನಮಗೆ ಯಾರಾದರೂ ಒಳ್ಳೆಯದು ಮಾಡಿದರೆ ಅದನ್ನು ಕಲ್ಲಿನ ಮೇಲೆ ಬರೆದಿಡಬೇಕು. ಏಕೆಂದರೆ ಅದು ಯಾವತ್ತು ಅಳಿಸಿ ಹೋಗುವುದಿಲ್ಲ. 

ಒಳಾರ್ಥ: ನಮಗೆ ಏನಾದರೂ ಕೆಟ್ಟದ್ದು ಆದರೆ ಅದನ್ನು ಕೂಡಲೇ ಮರೆಯಬೇಕು, ಒಳ್ಳೆಯದು ಆದರೆ ಯಾವಾಗಲೂ ನೆನಪಿನಲ್ಲಿಡಬೇಕು.
ಶುಭ ದಿನ...
🌹🙏
dgnsgreenworld

No comments:

Post a Comment

welcome to dgnsgreenworld Family

ಕಡಲೆ ಕಾಯಿ ಬೀಜ ಬಾದಾಮಿಗಿಂತ ಹೆಚ್ಚು ಆರೋಗ್ಯಕ್ಕೆ ಒಳ್ಳೆಯದೆಂದು ಅಧ್ಯಯನಗಳು ತಿಳಿಸಿವೆ ..

ಸಿಕ್ಕಾಪಟ್ಟೆ ಹಸಿ ಕಡ್ಲೆಕಾಯಿ ಬೀಜ ಬಂದಿದೆ... ಹೈಬ್ರಿಡ್ ಕೂಡ ಸಿಕ್ತಾ ಇದೆ... ಚಳಿಗಾಲಕ್ಕೆ ಕಡ್ಲೆಕಾಯಿ ಬೀಜ ಅತ್ಯಂತ ಉತ್ತಮ ಆಹಾರ ಯಾಕೆ.. ಒಂದು ಸಲ ನೋಡಿ ಇದು ನನ್ನ ಹ...

Green World